July 29, 2026
screenshot_20260701_0939392857078063307853219.jpg
ಬೆಂಗಳೂರು: ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (DP&AR) ಮಂಗಳವಾರ (ಜೂನ್ 30) ಮಹತ್ವದ ಆದೇಶ ಹೊರಡಿಸಿದ್ದು, ಹುದ್ದೆಯ ನಿರೀಕ್ಷೆಯಲ್ಲಿದ್ದ ನಾಲ್ವರು ಹಿರಿಯ ಐಎಎಸ್‌ (IAS) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ಇಲಾಖೆಗಳಿಗೆ ನಿಯೋಜಿಸಿ ಆದೇಶಿಸಿದೆ.
ವಿಧಾನಸೌಧದಲ್ಲಿ ಹೊರಡಿಸಲಾದ ಈ ಅಧಿಕೃತ ಅಧಿಸೂಚನೆಯ ಸಂಪೂರ್ಣ ವಿವರಗಳು ಇಲ್ಲಿವೆ:
ಅಭಿರಾಮ್ ಜಿ. ಶಂಕರ್ ಬಿಎಂಇಆರ್‌ಸಿ ಎಂಡಿಯಾಗಿ ನೇಮಕ
ಹುದ್ದೆಯ ನಿರೀಕ್ಷೆಯಲ್ಲಿದ್ದ 2011ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಅಭಿರಾಮ್ ಜಿ. ಶಂಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಕರ್ನಾಟಕ ಮೈನಿಂಗ್‌ ಎನ್ವಿರಾನ್‌ಮೆಂಟ್‌ ರಿಸ್ಟೋರೇಶನ್ ಕಾರ್ಪೊರೇಷನ್’ (KMERC) ವ್ಯವಸ್ಥಾಪಕ ನಿರ್ದೇಶಕರನ್ನಾಗಿ (MD) ನೇಮಿಸಲಾಗಿದೆ. ಜೂನ್ 30 ರಂದು ವಯೋನಿವೃತ್ತಿ ಹೊಂದುತ್ತಿರುವ ಐಎಫ್‌ಎಸ್‌ ಅಧಿಕಾರಿ ಡಾ. ಸಂಜಯ್ ಎಸ್. ಬಿಜೂರ್ ಅವರ ಜಾಗಕ್ಕೆ ಅಭಿರಾಮ್

ಕೆಲೋನಿಕ್ಸ್‌ನ ಹೆಚ್ಚುವರಿ ಜವಾಬ್ದಾರಿ ಹೊತ್ತ ಡಾ. ಅವಿನಾಶ್ ಮೆನನ್ ರಾಜೇಂದ್ರನ್

2013ರ ಬ್ಯಾಚ್‌ನ ಐಎಎಸ್ ಅಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರನ್ನು ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (IT-BT) ಇಲಾಖೆಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆಗೆ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ‘ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ನಿಯಮಿತ’ (KEONICS) ವ್ಯವಸ್ಥಾಪಕ ನಿರ್ದೇಶಕರ (MD) ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ.

ಕೃಷಿ ಮಾರಾಟ ಇಲಾಖೆಗೆ ಯೋಗೀಶ್ ಎ. ಎಂ.

ಹುದ್ದೆಯ ನಿರೀಕ್ಷೆಯಲ್ಲಿದ್ದ ಮತ್ತೊಬ್ಬ 2013ರ ಬ್ಯಾಚ್‌ನ ಐಎಎಸ್ ಅಧಿಕಾರಿ ಯೋಗೀಶ್ ಎ. ಎಂ. ಅವರನ್ನು ಬೆಂಗಳೂರಿನ ಕೃಷಿ ಮಾರಾಟ ಇಲಾಖೆಯ (Department of Agricultural Marketing) 2 ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಈ ಮೂಲಕ ಕೃಷಿ ಮಾರಾಟ ಇಲಾಖೆಯ ಹೆಚ್ಚುವರಿ ಉಸ್ತುವಾರಿಯಲ್ಲಿದ್ದ ಶ್ರೀ ಪ್ರಸನ್ನ ಎಚ್. (IAS) ಅವರನ್ನು ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಆಯುಕ್ತರಾಗಿ ದಿವ್ಯಾ ಪ್ರಭು 2. . .

2014ರ ಬ್ಯಾಚ್‌ನ ಐಎಎಸ್ ಅಧಿಕಾರಿ ದಿವ್ಯಾ ಪ್ರಭು ಜಿ. ಆ‌ರ್. ಜೆ. ಅವರನ್ನು ಬೆಂಗಳೂರಿನ ಗ್ರಾಮೀಣಾಭಿವೃದ್ಧಿ (Commissioner for Rural Development) ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜಿಸಲಾಗಿದೆ. ಈ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿದ್ದ ಡಾ. ಅರುಂಧತಿ ಚಂದ್ರಶೇಖರ್ (IAS) ಅವರನ್ನು ಈ ಜವಾಬ್ದಾರಿಯಿಂದ ಬಿಡುಗಡೆಗೊಳಿಸಲಾಗಿದೆ.

ರಾಜ್ಯ ಸರ್ಕಾರದ ನಿಯಮಗಳ ಅಡಿಯಲ್ಲಿ ಕೆಎಂಇಆರ್‌ಸಿ (KMERC) ವ್ಯವಸ್ಥಾಪಕ ನಿರ್ದೇಶಕರ ಹುದ್ದೆ ಹಾಗೂ ಕೆಲೋನಿಕ್ಸ್ (KEONICS) ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗಳನ್ನು ಪೌರಾಡಳಿತ ನಿರ್ದೇಶಕರ ಕೇಡ‌ರ್ ಹುದ್ದೆಗೆ ಸಮಾನ ಸ್ಥಾನಮಾನ ಮತ್ತು ಜವಾಬ್ದಾರಿಯ ಶ್ರೇಣಿ ಎಂದು ಸರ್ಕಾರ ಘೋಷಿಸಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಂತೇಶ್ ಅವರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

About The Author

Leave a Reply

Your email address will not be published. Required fields are marked *