ಬೈಂದೂರು: ಹೊಸ ಕಿರಣ ವೆಬ್ ನ್ಯೂಸ್ ಶಿಕ್ಷಾ ಅಭಿಯಾನ ಶಾಲೆಗೆ ಪುಸ್ತಕ, ಬ್ಯಾಗ್, ಕಲಿಕ ಪರಿಕರಗಳನ್ನು ದಾನಿಗಳ ನೆರವಿನಿಂದ ವಿತರಣೆ

ಬೈಂದೂರು : ಸರಕಾರಿ ಶಾಲೆ ಉಳಿಸಿ ಬೆಳಸಿ ಎನ್ನುವ ನಿಟ್ಟಿನಲ್ಲಿ ಪತ್ರಕರ್ತ ಕಿರಣ್ ಪೂಜಾರಿ ಮದ್ದುಗುಡ್ಡೆ ಕಳೆದ ಹಲವಾರು ವರ್ಷದಿಂದ ನಡೆಸಿಕೊಂಡು ಬಂದ ಶಿಕ್ಷಾ ಅಭಿಯಾನ ಅವರು ಇಂದು ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮದ ಕೊಡಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶೈಕ್ಷಣಿಕ ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಬೇಕಾಗುವಂತ ಪುಸ್ತಕ, ಬ್ಯಾಗ್, ಪೆನ್ನು, ಇನ್ನಿತರ ಕಲಿಕ ಪರಿಕರವನ್ನು ದಾನಿಗಳ ನೆರವಿನಿಂದ ವಿದ್ಯಾರ್ಥಿಗಳಿಗೆ ನೀಡಿದರು.
ಪತ್ರಕರ್ತರು ಸಾರ್ವಜನಿಕ ವಲಯದಲ್ಲಿ ಸೇವೆ ಮಾಡುತ್ತಾ ಬಂದಿದ್ದಾರೆ! ಆದರೆ ಪತ್ರಕರ್ತ ಕಿರಣ್ ಪೂಜಾರಿಯವರು ಮಾತ್ರ ವಿವಿಧ ಸರಕಾರಿ ಶಾಲೆಯನ್ನು ಗುರುತಿಸಿ ಶಾಲೆಗೆ ಬೇಕಾಗುವ – ಕಲಿಕ ಪರಿಕರಗಳನ್ನು ನೀಡುತ್ತಾ ಬಂದಿರುತ್ತಾರೆ, ಇಂತಹ ಸೇವೆ ಮಾಡುತ್ತಿರುವುದು ನೋಡಿ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವರದಿ,; ಜನಾರ್ದನ ಕೆ ಎಂ ಮರವಂತೆ

About Janardhana K M

Check Also

ತಾಯಿಯನ್ನು ರಾಡ್‌ನಿಂದ ಕೊಂದ ಪಾಪಿ ಮಗ

By NEWS DESK2ಬೆಂಗಳೂರು: ಕುಡಿಯಲು ಹಣ ಕೊಡದೇ ಇದ್ದದ್ದಕ್ಕೆ ತನ್ನ ಸ್ವಂತ ತಾಯಿಯನ್ನೇ ಮಗನು ರಾಡ್ ನಿಂದ ಹೊಡೆದು ಕೊಂದ …

Leave a Reply

Your email address will not be published. Required fields are marked *