Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಅಕ್ರಮ ಮದ್ಯ ಮಾರಾಟ : ಆರೋಪಿ ವಶಕ್ಕೆ…!!

ಉಡುಪಿ : ನಗರದ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವಾಗ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತ ಆರೋಪಿ ಶಂಭುಲಿಂಗ ಮಡಿವಾಳ ಎಂದು ಗುರುತಿಸಲಾಗಿದೆ.

ಆರೋಪಿ ಬಳಿ ಇದ್ದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದು
ಪ್ರಕರಣದ ವಿವರ ದಿನಾಂಕ 11.06.2025ರಂದು  ಉಡುಪಿ ನಗರ ಠಾಣೆಯ ಪೊಲೀಸರು, ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಹಳೇ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಹತ್ತಿರ ಇರುವ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ದಾಳಿ ನಡೆಸಿ, ಆಪಾದಿತ ಶಂಭುಲಿಂಗ ಮಡಿವಾಳ (37), ತಂದೆ ಸೋಮಪ್ಪ ಮಡಿವಾಳ, ಉಳಿಯಾಡಿ, ರಾಣೆಬೆನ್ನೂರು, ಹಾವೇರಿ ಎಂಬಾತನು ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ತನ್ನ ಸ್ವಂತ ಲಾಭಕ್ಕಾಗಿ ಮದ್ಯ ಮಾರಾಟ ಮಾಡುತ್ತಿದ್ದುಆರೋಪಿಯನ್ನು ದಸ್ತಗಿರಿ ಮಾಡಿ, ಆತನ ವಶದಿಂದ ಒಟ್ಟು ರೂ. 2,600/- ಮೌಲ್ಯದ ವಿವಿಧ ಬ್ರಾಂಡ್ ನ ಮದ್ಯದ ಪ್ಯಾಕೇಟ್ ಮತ್ತು ನಗದು ರೂ. 3,960/-ನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ನಗರ ಠಾಣಾ ಅಪರಾಧ ಕ್ರಮಾಂಕ : 96/2025, ಕಲಂ: 32, 34 Excise act ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಈ ಪ್ರಕರಣದ ಆರೋಪಿಯಾದ ಶಂಭುಲಿಂಗ ನನ್ನು ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಗೊಡಿಸಲಾಗುವುದು.

About The Author

Leave a Reply

Your email address will not be published. Required fields are marked *