Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ; 10 ಜನ ಅರೆಸ್ಟ್

ಬೈಂದೂರು ;ಕುಂದಾಪುರದ ಸಿದ್ದಾಪುರ ಗ್ರಾಮದ ಮಂಜುನಾಥ್ ಕಾಂಪ್ಲೆಕ್ಸ್‌ ಕಟ್ಟಡದ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಸಂಘಟಿತರಾಗಿ ಹಣವನ್ನು ಇಟ್ಟು ಅಂದರ್ ಬಾಹ‌ರ್ ಜೂಜಾಟ ಆಟ ಆಡುತ್ತಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರಿಂದ 8,810 ರೂ ನಗದು, 10 ಮೊಬೈಲ್ ಫೋನ್, ಜೂಜಾಟ ಆಡಲು ಬಂದಿದ್ದ 3 ಮೋಟಾರು ಸೈಕಲ್ ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *