- ನಿಂತು ಹೋಗುವ ಸ್ಥಿತಿಯಲ್ಲಿದ್ದ ಕಾಮಗಾರಿಗೆ ಮರುಜೀವ ನೀಡಿದ-ಸಚಿವ ಮಂಕಾಳ ವೈದ್ಯ
- ವರದಿ; ಜನಾರ್ದನ ಮರವಂತೆ

ಸಿಆರ್ಡ್ ಸಡಳೀಕರಣದಿಂದ
ಕಾರವಾರದ ದಿಂದ ಮಂಗಳೂರು ತನಕ 320 ಕಿ.ಮೀ ಕರಾವಳಿ ತೀರದಲ್ಲಿ ಸಿಆರಡ್ ಕ್ಲಿಯರೆನ್ಸ್ ಮಾಡಲಾಗಿದೆ.ಮುಂದಿನ ದಿನಗಳಲ್ಲಿ ಯಾವುದೆ ರೀತಿಯ ಅಡ್ಡಿ ಆತಂಕವಿಲ್ಲದೆ ಕೆಲಸ ಕಾರ್ಯಗಳನ್ನು ಮಾಡಲು ಅನುಕೂಲವಾಗಲಿದೆ.ಮೀನುಗಾರಿಕಾ ವಲಯಕ್ಕೆ ಆರ್ಥಿಕ ಕೊರತೆ ಆಗಬಾರದು ಎನ್ನುವ ಉದ್ದೇಶದಿಂದ ಗಂಗೊಳ್ಳಿ ಬಂದರು ಅಭಿವೃದ್ಧಿಗೆ ಕ್ಯಾಬಿನೆಟ್ನಲ್ಲಿ 22 ಕೋಟಿ.ರೂ ಮಂಜೂರಾತಿ ನೀಡಲಾಗಿದ್ದು ಕೆಲಸ ಆರಂಭಗೊಳ್ಳಲಿದೆ.ಹಲವಾರು ವರ್ಷಗಳಿಂದ ಬೇಡಿಕೆಯಲ್ಲಿದ್ದ ಸೀ ಆಂಬ್ಯುಲೆನ್ಸ್ಗೆ ಟೆಂಡರ್ ಕೂಡ ಕರೆಯಲಾಗಿದೆ. ಕೇಂದ್ರ ಸರಕಾರ ಸೀಮೆಎಣ್ಣೆ ಮೇಲೆ 18% ಜಿಎಸ್ಟಿ ವಿಧಿಸಿದ್ದರಿಂದ ದರ ಏರಿಕೆ ಕಂಡಿದ್ದು.ನಮ್ಮ ಸರಕಾರದ ವತಿಯಿಂದ ಬೇಕಾದಷ್ಟು ಕ್ರಮ ಕೈಗೊಂಡಿದೆ,
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ಮರವಂತೆ ಬಂದರು ಅಭಿವೃದ್ಧಿ ಸಹಿತ ಕೊಡೇರಿ,ಗಂಗೊಳ್ಳಿ,ಬಂದರು ಅಭಿವೃದ್ಧಿಗೆ ಬಜೆಟ್ನಲ್ಲಿ ಅನುದಾನ ಘೋಷಣೆ ಮಾಡುವಲ್ಲಿ ಶ್ರಮಿಸಬೇಕು ಎಂದು ಸಚಿವರಲ್ಲಿ ವಿನಂತಿಸಿದರು.
ಅಧ್ಯಕ್ಷತೆ ವಹಿಸಿದ ಬೈಂದೂರು ಕ್ಷೇತ್ರದ ಗುರುರಾಜ ಗಂಟಿಹೊಳೆ ಮಾತನಾಡಿ,ಯಾವುದೆ ಸರಕಾರಗಳು ಬಂದರು ಕೂಡ ಮೀನುಗಾರಿಕಾ ಕ್ಷೇತ್ರದ ಕೆಲಸಗಳು ವಿಳಂಭವಾಗುತ್ತದೆ.ಅಂತಹ ಸನ್ನಿವೇಶ ಎದುರಾಗದಂತೆ ಅಭಿವೃದ್ಧಿ ಕಾರ್ಯಗಳು ಚುರುಕಿನಿಂದ ನಡೆಯಬೇಕು ,ಕೇಂದ್ರದ
ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನ ಮಾಡಲು ಸಚಿವರು ಚಿಂತನೆ ಮಾಡಬೇಕು
ಮರವಂತೆ,ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ರಾದ ಸುರೇಶ್ ಖಾರ್ವಿ, ಮಾರ್ಕೆಟ್ ಸಮಿತಿ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ, ವಾಸುದೇವ ಖಾರ್ವಿ, ಶೇಖರ್ ಖಾರ್ವಿ,ಸತೀಶ್ ಎಂ ನಾಯಕ್, ಹಕ್ಕಾಗಿ ಜಗದೀಶ್,ಎಡಿ ಸುಮಲತಾ ಮೀನುಗಾರಿಕಾ ಅದಿಕಾರಿಗಳು ಊರಿನ ಮೀನುಗಾರ ಬಂದುಗಳು ಉಪಸ್ಥಿತರಿದ್ದರು.ಶ್ರೀಧರ ಖಾರ್ವಿ ನಿರೂಪಿಸಿ,ವಂದಿಸಿದರು