Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

“ಸಿಂಗಾರ ಸಿರಿ” ಮದುಮಗಳ ಶೃಂಗಾರ ಆ.24ರಂದುಅಖಿಲ ಕರ್ನಾಟಕ ಮಹಿಳಾ ಸೌಂದರ್ಯ ತಜ್ಞೆಯರ ಸಂಘ

ಬೈಂದೂರು ,;ಉಡುಪಿ ,ಅಖಿಲ ಕರ್ನಾಟಕ ಮಹಿಳಾ ಸೌಂದರ್ಯ ತಜ್ಞೆಯರ ಸಂಘ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಗೀತಾ ಪರ್ಯಾಯದ ಪ್ರಯುಕ್ತ “ಸಿಂಗಾರ ಸಿರಿ” ಮದುಮಗಳ ಶೃಂಗಾರದಲ್ಲಿ ಸೌಂದರ್ಯ ತಜ್ಞೆಯರ ಕೌಶಲಗಳ ಅನಾವರಣ ಕಾರ್ಯಕ್ರಮವನ್ನು ಆಗಸ್ಟ್ 24ರಂದು ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಮಹಿಳಾ ಸೌಂದರ್ಯ ತಜ್ಞೆಯರ ಸಂಘದ ಉಡುಪಿ ಜಿಲ್ಲಾಧ್ಯಕ್ಷೆ ನಂದಾ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಇದು ಕರಾವಳಿ ಕರ್ನಾಟಕದಲ್ಲಿಯೇ ಪ್ರಪ್ರಥಮ ಪ್ರದರ್ಶನವಾಗಿದ್ದು, ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9.30ಕ್ಕೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು
ಬೈಂದೂರು, ಕುಂದಾಪುರ, ಕಾರ್ಕಳ, ಬ್ರಹ್ಮಾವರ, ಉಡುಪಿ, ಕಾಪು ಹಾಗೂ ಕಾರ್ಕಳ ವಲಯದಿಂದ 100ಕ್ಕೂ ಅಧಿಕ  ಪಾರ್ಲರ್ ನವರು ಭಾಗವಹಿಸಲಿದ್ದಾರೆ. ಅಲ್ಲದೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

About The Author

Leave a Reply

Your email address will not be published. Required fields are marked *