ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿಕಾರ್ಮಿಕ ಗಂಭೀರ ಗಾಯ.

ಪುತ್ತೂರು: ಲಾರಿಯೊಂದಕ್ಕೆ ಟಯ‌ರ್ ಜೋಡಣೆ ವೇಳೆ ಟಯ‌ರ್ ರಿಂಗ್ ಚಿಮ್ಮಿ ಟಯ‌ರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಕರಾಯ ಜನತಾ ಕಾಲೋನಿ ನಿವಾಸಿ ರಶೀದ್ ಗಂಭೀರ ಗಾಯಗೊಂಡವರು.
ಲಾರಿಯೊಂದು ಟಯರ್ ಪಂಚರ್ ಆದ ಪರಿಣಾಮ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯ‌ರ್ ಪಂಚರ್ ಮಾಡಿಸಿಕೊಂಡು ಆಟೋರಿಕ್ಷಾದಲ್ಲಿ ಟಯ‌ರ್ ತಂದಿದ್ದರು. ಟಯ‌ರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ

ರಶೀದ್  ಟಯರ್ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯ‌ರ್ ಸಮೇತ ಸ್ವಲ್ಪ ದೂರ ಎಸೆಯಲ್ಪಟ್ಟಿದ್ದಾರೆ.  ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

About Janardhana K M

Check Also

ತಾಯಿಯನ್ನು ರಾಡ್‌ನಿಂದ ಕೊಂದ ಪಾಪಿ ಮಗ

By NEWS DESK2ಬೆಂಗಳೂರು: ಕುಡಿಯಲು ಹಣ ಕೊಡದೇ ಇದ್ದದ್ದಕ್ಕೆ ತನ್ನ ಸ್ವಂತ ತಾಯಿಯನ್ನೇ ಮಗನು ರಾಡ್ ನಿಂದ ಹೊಡೆದು ಕೊಂದ …

Leave a Reply

Your email address will not be published. Required fields are marked *