October 21, 2025
img-20250924-wa00102555146152814540278.jpg

ಉಡುಪಿ ಸೆ. 23: ಮನೋರೋಗಿ ಮಹಿಳೆ ತನ್ನ ಇಬ್ಬರು ಮಂದಮತಿಯರಾದ ಹೆಣ್ಣು ಮಕ್ಕಳೊಂದಿಗೆ ನಗರದ ದೇವಸ್ಥಾನ, ಪೊಲೀಸ್ ಠಾಣೆ, ನ್ಯಾಯಾಲಯ ಸಿಕ್ಕ ಸಿಕ್ಕಲ್ಲಿ ತಿರುಗಾಡುತ್ತಾ ಸಾರ್ವಜನಿಕರ ವಿರುದ್ಧ ಸುಳ್ಳು ದೂರು ದಾಖಲಿಸುವುದು, ನೆರೆಮನೆಯವರಿಗೆ ನಿರಂತರ ಅವಾಚ್ಯಾ ಶಬ್ದ ಬಳಸಿ ಬಯ್ಯುವುದರ ಜೊತೆಗೆ ಅನಾಗರಿಕ ಬದುಕು ಸಾಗಿಸುತ್ತಿದ್ದು ವಿಶು ಶೆಟ್ಟಿ ಅಂಬಲಪಾಡಿಯವರು ಸಖಿ ಸೆಂಟರಿನ ಸಿಬ್ಬಂದಿಗಳ ಸಹಾಯದಿಂದ ರಕ್ಷಿಸಿ ಮಂಜೇಶ್ವರ ದೈಗೋಳಿಯ ಮಾನಸಿಕ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದರು.

ಶೆಟ್ಟಿಯವರು, ಕೂಡಲೇ ಸ್ಪಂದಿಸಿ ದೈಗೋಳಿಯ ಆಶ್ರಮದ ಮುಖ್ಯಸ್ಥರಾದ ಡಾ। ಉದಯ ಕುಮಾ‌ರ್ ದಂಪತಿಯ ಅನುಮತಿ ಪಡೆದು ಖಾಸಗಿ ವಾಹನದ ಮೂಲಕ ಮಂಜೇಶ್ವರಕ್ಕೆ ದಾಖಲಿಸುವ ಮುಖಾಂತರ ಸಮಸ್ಯೆಗೆ ಪರಿಹಾರ ನೀಡಿದ್ದಾರೆ. ಕಾರ್ಯಚರಣೆಯಲ್ಲಿ ಮಹಿಳಾ ಪೋಲಿಸ್ ಠಾಣೆಯ HC ಮಲ್ಲಿಕಾ ಸಹಕರಿಸಿದರು.

About The Author

Leave a Reply

Your email address will not be published. Required fields are marked *