ಶ್ರೀ ಸುಬ್ರಮಣ್ಯ ದೇವಸ್ಥಾನ ಚಿತ್ತೇರಿ ಅರಾಟೆ ಇದರ ನಾಗ ಬ್ರಹ್ಮ ಸಪರಿವಾರ ದೇವರ ಪ್ರತಿಷ್ಠಾಪನೆ, ರಾಮ ಮಂದಿರ ಉದ್ಘಾಟನೆ ಹಾಗೂ ನಾಗಮಂಡಲೋತ್ಸವ ಕಾರ್ಯಕ್ರಮ ದಿನಾಂಕ 12.04.2026 ಆದಿತ್ಯವಾರ ಇರುವುದರಿಂದ ನಾಗಮಂಡಲೋತ್ಸದ ಚಪ್ಪರ ಮುಹೂರ್ತ ಕಾರ್ಯಕ್ರಮ 25.03.2026 ಅಡಿಗರ ಪೌರೋಹಿತ್ಯದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಸದಸ್ಯರು ಮತ್ತು ಊರಿನ ಸಮಸ್ತ ನಾಗರಿಕರು ಉಪಸ್ಥಿತರಿದ್ದರು.ಈ ಕಾರ್ಯಕ್ರಮಕ್ಕೆ ಸದ್ಭಕ್ತರು ಭಾಗಿಯಾಗಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿಕೋಳ್ಳುತಿದ್ದವೆ