Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ

ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಘಟನೆ

ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿತ

ಪುತ್ತೂರಿನ ಬನ್ನೂರು ಎಂಬಲ್ಲಿ ನಸುಕಿನ ಜಾವ ಧರೆ ಕುಸಿದು ಮನೆಗೆ ಹಾನಿ ಸ್ಥಳಕ್ಕೆ ಪುತ್ತೂರು ನಗರಸಭೆ ಸದಸ್ಯರು ಸಹಿತ ಪೌರಾಯುಕ್ತರು ಭೇಟಿ.
ಪುತ್ತೂರು:ಪುತ್ತೂರು ತಾಲೂಕಿನ ಬನ್ನೂರಿನ ಜೈನರಗುರಿ ಸಮೀಪ ಮಜೀದ್‌ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದ್ದು ಘಟನಾ ಸ್ಥಳಕ್ಕೆ ನಗರಸಭಾ ಸದಸ್ಯರಾದ ಪಾತಿಮಾತ್ ಜೋರಾ, ಪಿ ಜಿ ಜಗನ್ನಿವಾಸ ರಾವ್, ಪೌರಾಯುಕ್ತ ಮಧು ಎಸ್ ಮನೋಹ‌ರ್, ಕಂದಾಯ ನಿರೀಕ್ಷರು ಭೇಟಿ ನೀಡಿದರು.
ಈ ಸಂದರ್ಭ ಸ್ಥಳಿಯ ನಿವಾಸಿ ಗಣೇಶ್ ಆಚಾರ್ಯ ಸಹಿತ ಹಲವಾರು ಮಂದಿ ಮಣ್ಣು ತೆರವು ಕಾರ್ಯದಲ್ಲಿ ಸಹಕರಿಸಿದರು.

About The Author

Leave a Reply

Your email address will not be published. Required fields are marked *