ಶವ ಸ್ವೀಕರಿಸಲೊಪ್ಪದ ಸಹೋದರ : ಕೊನೆಗೆ ವಿಶು ಶೆಟ್ಟಿ ಅವರಿಂದ ಅಂತ್ಯಕ್ರಿಯೆ

ಮೃತ ವ್ಯಕ್ತಿಯ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಮೃತನ ಸಹೋದರನನ್ನು ಕರೆಯಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಕೊನೆಗೆ ಅಂತ್ಯಸAಸ್ಕಾರ ನಡೆಸಲು ಮೃತ ದೇಹವನ್ನು ಪಡೆಯಲು ಸಹೋದರ ನಿರಾಕರಿಸಿದರು. ಆತನ ಮನವೊಲಿಸುವ ಕೆಲಸವೂ ವಿಫಲವಾಯಿತು.
ಕೊನೆಗೆ ಜಿಲ್ಲಾಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ನಂತರ ವಿಶು ಶೆಟ್ಟಿ ಅವರೇ ಶವವನ್ನು ಸ್ವೀಕರಿಸಿ, ಮೃತ ವ್ಯಕ್ತಿಯ ಧರ್ಮದ ಪ್ರಕಾರ ದಫನ ಕಾರ್ಯ ನಡೆಸಿದರು.
ಅಂಬಲಪಾಡಿ ಕೃಷ್ಣ ಜೆಸಿಬಿ ನೀಡಿ ಸಹಕರಿಸಿದರು. ಈ ಪ್ರಕರಣವನ್ನು ಗಮನಿಸಿದಾಗ ಸಹೋದರತೆ, ಬಾಂಧವ್ಯ ಎಲ್ಲಾ ಮರೀಚಿಕೆಯೇ ಎಂಬ ಪ್ರಶ್ನೆ ಕಾಡದಿರದು ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ
