
ಮಾಜಿ ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಎಸ್.ರಾಜು ಪೂಜಾರಿ ಯವರು ಹಿರಿಯ ಮುಂದಾಳುಗಳಾಗಿದ್ದು. ಅವರ ಅಧ್ಯಕ್ಷತೆಯ ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅತ್ಯುತ್ತಮ ಸಹಕಾರಿ ಸಂಸ್ಥೆಯಾಗಿ ಮೂಡಿಬಂದಿದೆ.ಮರವಂತೆಯಲ್ಲಿ 6ನೇ ನೂತನ ಶಾಖೆಯನ್ನು ಆರಂಭಿಸುವ ಮೂಲಕ ಗ್ರಾಮೀಣ ಭಾಗಕ್ಕೆ ಇನ್ನಷ್ಟು ಆರ್ಥಿಕ ಸಹಕಾರ ದೊರೆಯುವಂತಾಗಿದೆ.ಸಂಸ್ಥೆ ಗುಣಮಟ್ಟದ ಸೇವೆ ಮೂಲಕ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

