

7 ಬುಟ್ಟಿಗಳಲ್ಲಿ ಒಟ್ಟು 56 ಸೇರು ಅಕ್ಕಿಯ ನೈವೇದ್ಯವನ್ನು ಮಂಗಳ ವಾದ್ಯಘೋಷದ ಮೂಲಕ ನೆಗಳನ ಗುಂಡಿಗೆ ಹಾಕಲಾಯಿತು. ಆಭಾರಿ ಸೇವೆಯ ಪ್ರಯುಕ್ತ ಬೆಳಿಗ್ಗೆ
ಬೆಳ್ಳಿ ರಥವನ್ನು ಎಳೆದು ದೇವರಿಗೆ ಸೇವೆಯನ್ನು ಸಮರ್ಪಿಸಲಾಯಿತು.
ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ ಏಕಾದಶೀಯ ರುದ್ರಾಭಿಷೇಕ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಪುರೋಹಿತರ ನೇತೃತ್ವದಲ್ಲಿ ಸಂಪನ್ನಗೊಂಡಿತು.
ಮರವಂತೆಯ ಮೀನುಗಾರ ಸಮುದಾಯ ಮತ್ತು ನಾಡ ಹಡವು ಗ್ರಾಮಸ್ಥರ ಈ ಸೇವೆ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಪ್ರಕೃತಿ, ಜಲಚರ, ಜೀವಜಂತುಗಳಿಗೆ ಆಭಾರಿಯಾಗಿದ್ದೇವೆ ಎನ್ನುವ ಸಂದೇಶ ನೀಡುವ ಹಬ್ಬ ಹಾಗೂ ನೀರನ್ನೇ ನಂಬಿದ ಜನ ಇದೇ ನೀರಿನಲ್ಲಿರುವ ಜಲಚರಗಳಿಗೂ ಅನ್ನಾಹಾರ ನೀಡುವ ಮೂಲಕ ಕೃತಜ್ಞತೆ ಸಲ್ಲಿಸುವ ಉತ್ಸವದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು.
ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ಸುಕ್ಷೇತ್ರ ನರಸೀಪುರದ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಜೇಶ ಹೆಬ್ಬಾರ್, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ನಾಗೇಶ ಖಾರ್ವಿ, ಮಾಜಿ ಅಧ್ಯಕ್ಷರಾದ ಆನಂದ ಖಾರ್ವಿ, ಕುಮಾರ್ ಖಾರ್ವಿ, ಗೌರವಾಧ್ಯಕ್ಷ ಮದನ ಕುಮಾರ್, ಮಾಜಿ ಅಧ್ಯಕ್ಷರಾದ ಸೋಮಶೇಖರ ಖಾರ್ವಿ,ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜಶೇಖರ ಹೆಬ್ಬಾರ್, ಮಾಜಿ ಶಾಸಕ ಗೋಪಾಲ ಪೂಜಾರಿ,
ಮರವಂತೆ ಶ್ರೀರಾಮ ಮಂದಿರ ಸೇವಾ ಸಮಿತಿ ಅಧ್ಯಕ್ಷ ಸುರೇಶ ಖಾರ್ವಿ, ಬೈಂದೂರು ವಲಯ ಹಸಿ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಉದಯ ಖಾರ್ವಿ, ಮೀನುಗಾರ ವಿವಿಧ ಸಂಘಟನೆಗಳ ಮುಖಂಡರಾದ ವಾಸುದೇವ ಖಾರ್ವಿ, ವೆಂಕಟರಮಣ ಖಾರ್ವಿ, ಯಶವಂತ ಖಾರ್ವಿ ಗಂಗೊಳ್ಳಿ, ನವೀನಚಂದ್ರ ಉಪ್ಪುಂದ, ರಾಮ ಖಾರ್ವಿ ಉಪ್ಪುಂದ ,ಮರವಂತೆ ಗ್ರಾಪಂ ಅಧ್ಯಕ್ಷ ನಾಗರಾಜ ಪಟಗಾರ್, ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹನ್ ಚಂದ್ರ,ಮಹೇಂದ್ರ ಪೂಜಾರಿ, ರಾಜು ಪೂಜಾರಿ , ನಾಗೇಶ್ ಖಾರ್ವಿ ಮೆಡಿಕಲ್ , ಸುಧಾಕರ ಖಾರ್ವಿ ಉಪ್ಪುಂದ,ತಿಮ್ಮಪ್ಪ ಖಾರ್ವಿ ಉಪ್ಪುಂದ, ಮಂಜುನಾಥ ಖಾರ್ವಿ ಉಪ್ಪುಂದ, ಮಹೇಶ್ ಖಾರ್ವಿ, ಅರೆಹೊಳೆ ಸುರೇಶ್ ಖಾರ್ವಿ ಮರವಂತೆ ಮೊದಲಾದವರು ಉಪಸ್ಥಿತರಿದ್ದರು.



