March 6, 2026
img_20260130_2124183923903584463767870.jpg
ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಉಡುಪಿ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಜಿಲ್ಲಾ ಕಾರ್ಯದರ್ಶಿಯಾಗಿ ಪುರುಷೋತ್ತಮ್ ಪೂಜಾರಿ ಕೊಡಪಾಡಿ ಅವರು ಅಧಿಕೃತವಾಗಿ ನೇಮಕಗೊಂಡಿದ್ದಾರೆ. ಇಂದು ಸಂಜೆ ಉಡುಪಿಯ ಸರ್ಕ್ಯೂಟ್ ಹೌಸ್ ಇಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ಬಂಗ್ಲೆ ಮಲ್ಲಿಕಾರ್ಜುನ ಅವರು ಪುರುಷೋತ್ತಮ್ ಪೂಜಾರಿ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿ, ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು.
ಗಣ್ಯರ ಉಪಸ್ಥಿತಿ ಪತ್ರಕರ್ತರ ಹಿತರಕ್ಷಣೆ ಮತ್ತು ಸಂಘಟನೆಯ ಬಲವರ್ಧನೆಯ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಿ ನೂತನ ಕಾರ್ಯದರ್ಶಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಮಯದಲ್ಲಿ ಉಪಸ್ಥಿತರಿದ್ದ ಪ್ರಮುಖರು: ದಾಮೋದ‌ರ್ ಮೊಗವೀರ ನಾಯಕವಾಡಿ: ಉಡುಪಿ ಜಿಲ್ಲಾ ಅಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ.

ಅ. ರಾ. ಪ್ರಭಾಕ‌ರ್ ಪೂಜಾರಿ: ಉಡುಪಿ ಜಿಲ್ಲಾ ಅಧ್ಯಕ್ಷರು, ಕರ್ನಾಟಕ

ರಕ್ಷಣಾ ವೇದಿಕೆ.

ಸುಕುಮಾ‌ರ್ ಶೆಟ್ಟಿ: ರಾಜ್ಯ ಉಪಾಧ್ಯಕ್ಷರು, ಕರ್ನಾಟಕ ಹೋಟೆಲ್ ಕಾರ್ಮಿಕ ಸಂಘಟನೆ.

ಶ್ರೀಮತಿ ಮೋಹಿನಿ ಗಣೇಶ್: ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ರಕ್ಷಣಾ ವೇದಿಕೆ.

ಸಂಘಟನಾ ಬಲವರ್ಧನೆಗೆ ಕರೆ

ನೇಮಕಾತಿ ಪತ್ರ ಸ್ವೀಕರಿಸಿ ಮಾತನಾಡಿದ ಪುರುಷೋತ್ತಮ್ ಪೂಜಾರಿ ಅವರು, ಜಿಲ್ಲೆಯ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಸಂಘಟನೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು. ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರು ಮಾತನಾಡಿ, ಪತ್ರಕರ್ತರ ಧ್ವನಿಯು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು ಮತ್ತು ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

About The Author

Leave a Reply

Your email address will not be published. Required fields are marked *